Add parallel Print Page Options

ಜ್ಞಾನದ ಬೆಲೆ

28 “ಬೆಳ್ಳಿಯ ಗಣಿಗಳು ಇವೆ;
    ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ.
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು,
    ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು
    ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.
ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು;
    ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದುಹೋಗುವರು;
    ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ.
    ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು.
ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ.
    ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು.
ಭೂಮಿಯ ಕೆಳಭಾಗದಲ್ಲಿ
    ಇಂದ್ರನೀಲಮಣಿಗಳೂ ಚಿನ್ನದ ಅದಿರೂ ಸಿಕ್ಕುತ್ತವೆ.

Read full chapter