Add parallel Print Page Options

ಯೇಸುವನ್ನು ಕೊಲ್ಲಲು ಯೆಹೂದ್ಯ ನಾಯಕರ ಆಲೋಚನೆ

(ಮಾರ್ಕ 14:1-2; ಲೂಕ 22:1-2; ಯೋಹಾನ 11:45-53)

26 ಯೇಸು ಈ ಸಂಗತಿಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ, ತನ್ನ ಶಿಷ್ಯರಿಗೆ, “ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.

ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ. ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು. ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.

Read full chapter