ಮತ್ತಾಯ 5:1-12
Kannada Holy Bible: Easy-to-Read Version
ಪರ್ವತ ಪ್ರಸಂಗ
(ಲೂಕ 6:20-23)
5 ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು. 2 ಆಗ ಯೇಸು ಜನರಿಗೆ ಈ ಉಪದೇಶ ಮಾಡಿದನು:
3 “ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು.
ಪರಲೋಕರಾಜ್ಯ ಅವರದು.
4 ಈಗ ದು:ಖದಿಂದಿರುವವರು ಧನ್ಯರು.
ದೇವರು ಅವರನ್ನು ಸಂತೈಸುವನು.
5 ದೀನರು ಧನ್ಯರು.
ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.
6 ನೀತಿಗಾಗಿ ತವಕಪಡುವವರು ಧನ್ಯರು.
ದೇವರು ಅವರನ್ನು ಸಂತೃಪ್ತಿಪಡಿಸುವನು.
7 ಕರುಣೆ ತೋರುವವರು ಧನ್ಯರು.
ಅವರು ಕರುಣೆ ಹೊಂದುವರು.
8 ಪರಿಶುದ್ಧ ಹೃದಯವುಳ್ಳವರು ಧನ್ಯರು.
ಅವರು ದೇವರನ್ನು ನೋಡುವರು.
9 ಸಮಾಧಾನಪಡಿಸುವವರು ಧನ್ಯರು.
ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.
10 ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು.
ಪರಲೋಕರಾಜ್ಯ ಅವರದು.
11 “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ. 12 ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.
Read full chapterKannada Holy Bible: Easy-to-Read Version. All rights reserved. © 1997 Bible League International