Font Size
ಮತ್ತಾಯ 8:23-27
Kannada Holy Bible: Easy-to-Read Version
ಮತ್ತಾಯ 8:23-27
Kannada Holy Bible: Easy-to-Read Version
ಯೇಸುವಿನ ಆಜ್ಞೆಗೆ ಬಿರುಗಾಳಿಯ ವಿಧೇಯತೆ
(ಮಾರ್ಕ 4:35-41; ಲೂಕ 8:22-25)
23 ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು. 24 ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು. 25 ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.
26 ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
27 ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International